Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಮಾತನಾಡುತ್ತಿರುವಾಗಲೇ ಮತ್ತೊಬ್ಬನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ, ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ಮಾತಾಡಿ ಮುಗಿಸುವಷ್ಟರಲ್ಲೇ ಮತ್ತೊಬ್ಬನು ಬಂದು, “ದೇವರು ಆಕಾಶದಿಂದ ಬೆಂಕಿ ಸುರಿಸಿದರು. ಅದು ಕುರಿಗಳನ್ನೂ, ಕೂಲಿ ಆಳುಗಳನ್ನೂ ಸುಟ್ಟು ಭಸ್ಮಮಾಡಿತು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಮಾತಾಡುತ್ತಿರುವಾಗಲೇ ಮತ್ತೊಬ್ಬನು ಬಂದು ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಆಕಾಶದಿಂದ ಸಿಡಿಲೊಡೆದು ನಿನ್ನ ಕುರಿಗಳನ್ನೂ ಸೇವಕರುಗಳನ್ನೂ ಸಂಪೂರ್ಣವಾಗಿ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬ ದೂತನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ ಸೇವಕರನ್ನೂ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:16
13 ತಿಳಿವುಗಳ ಹೋಲಿಕೆ  

ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ


ಇದು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,


ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.


ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.


ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.


ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.


ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.


ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.


ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.


ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು