ಯೋಬ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
8 ಆಗ ಯೆಹೋವನು, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ, ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ” ಎಂದು ಸೈತಾನನಿಗೆ ಹೇಳಿದನು.
8 ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.
8 ಆಗ ಯೆಹೋವನು - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ ಎಂದು ಸೈತಾನನಿಗೆ ಹೇಳಿದನು.
8 ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಆಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು.
8 ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ,” ಎಂದರು.
ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.
ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ.
ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
ಆ ಪುರುಷನು ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು.
ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.