Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ, ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನು ದುರ್ಮಾರ್ಗಿಯಾದರಂತೂ ನನಗಿಲ್ಲ ಗತಿ ಸನ್ಮಾರ್ಗಿಯಾದರೂ ಕೂಡ ನಡೆವಂತಿಲ್ಲ ತಲೆಯೆತ್ತಿ ಏಕೆಂದರೆ ನಾಚಿ ನಿಂತಿರುವೆ, ಯಾತನೆಯ ಹೊರೆಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಯ್ಯೋ, ನಾನು ದುರ್ಮಾರ್ಗಿಯಾದರಂತು ನನಗೇನು ಗತಿ! ನಾನು ಸನ್ಮಾರ್ಗಿಯಾದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅಪಮಾನಭರಿತನಾಗಿ ತಲೆಯೆತ್ತಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ದೋಷಿಯಾಗಿದ್ದರೆ, ನನ್ನ ಗತಿಯನ್ನು ಏನು ಹೇಳಲಿ? ನಾನು ಸನ್ಮಾರ್ಗಿಯಾಗಿದ್ದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನದಿಂದ ನನ್ನ ತಲೆಯೆತ್ತಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ಅಪರಾಧಿಯಾಗಿದ್ದರೆ ನನಗೆ ಕಷ್ಟ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತಲಾರೆ; ಏಕೆಂದರೆ, ನಾಚಿಕೆಯಿಂದ ನಾನು ತುಂಬಿದ್ದೇನೆ, ನಾನು ಬಾಧೆಯಿಂದ ಮುಳುಗಿಹೋಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:15
23 ತಿಳಿವುಗಳ ಹೋಲಿಕೆ  

ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.


ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.


ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.


ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ?


ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.


ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.


ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.


ನನ್ನ ಹಗೆಗೆ ದುಷ್ಟನ ಗತಿಯಾಗಲಿ, ನನ್ನ ವಿರುದ್ಧವಾಗಿ ಎದ್ದವನು ಅ ನೀತಿವಂತನ ಗತಿಯನ್ನು ಕಾಣಲಿ!


ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ.


ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ, ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ.


ನಾನು ಅಪರಾಧಿಯೆಂದು ನಿರ್ಣಯಿಸಲ್ಪಡಬೇಕಷ್ಟೆ. ನಾನು ವ್ಯರ್ಥವಾಗಿ ಪ್ರಯಾಸಪಡುವುದೇಕೆ?


ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ‘ನೀನು ಏನು ಮಾಡುತ್ತಿ?’ ಎಂದು ಆತನನ್ನು ಕೇಳುವವರಾರು?


ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ದಯವಿಟ್ಟು ನನ್ನ ವಿಚಾರಣೆಗೆ ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆ ಮಾಡಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.


ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು.


ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು