Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮರಳಿ ಹಿಂದಿರುಗಲಾಗದ ನಾಡನು ನಾನು ಸೇರಲಿರುವೆ ಅಂಧಕಾರವೂ ಗಾಢಾಂಧಕಾರವೂ ಅಲ್ಲಿ ತುಂಬಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ಅಂಧಕಾರದಿಂದಲೂ ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರಿಗಿ ಬರಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾರೂ ಮರಳಿ ಬರಲಾಗದಂಥ ಕತ್ತಲೆಯ ಸ್ಥಳಕ್ಕೂ ಮರಣಾಂಧಕಾರದ ಸ್ಥಳಕ್ಕೂ ಹೋಗುವ ಮೊದಲೇ ನನಗಿರುವ ಅಲ್ಪಕಾಲವನ್ನು ಆನಂದಿಸಲು ಅವಕಾಶಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಹಿಂದಿರುಗಲಾಗದ ಮಬ್ಬಾಗಿರುವ ಕತ್ತಲೆಯ ದೇಶಕ್ಕೆ ಸೇರಲಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:21
21 ತಿಳಿವುಗಳ ಹೋಲಿಕೆ  

ಕತ್ತಲೆಯೂ, ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ.


ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.


ನಾನು ಹಿಂದಿರುಗದ ದಾರಿಯನ್ನು, ಕೆಲವು ವರ್ಷಗಳೊಳಗೆ ಹಿಡಿಯುವೆನು.”


ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.


‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲಿ ಒಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನು.


ಅಧೋಲೋಕದಲ್ಲಿಯೂ, ಗಾಢಾಂಧಕಾರದಲ್ಲಿಯೂ, ಅಗಾಧ ಸ್ಥಳದಲ್ಲಿಯೂ ನನ್ನನ್ನು ತಳ್ಳಿಬಿಟ್ಟಿದ್ದಿ.


ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು.


ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ, ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ, ಅದರ ಬೆಳಕು ರಾತ್ರಿಯ ಬೆಳಕಿನಂತೆ.”


ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, ಅನುಕೂಲವಾದ ಯಾವ ಕತ್ತಲೂ, ಯಾವ ಗಾಢಾಂಧಕಾರವೂ ಇರುವುದಿಲ್ಲ.


ಮರಣದ ಬಾಗಿಲುಗಳು ನಿನಗೆ ಗೋಚರವಾದವೋ? ಘೋರಾಂಧಕಾರದ ಕದಗಳನ್ನು ಕಂಡೆಯಾ?


ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.”


ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ, ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ.


ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ, ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.


ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು