Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ, ಬಾಧಿಸುವುದು ನಿನಗೆ ಸಂತೋಷವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ ಬಾಧಿಸುವದು ನಿನಗೆ ಸಂತೋಷವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರೇ, ನನ್ನನ್ನು ನೋಯಿಸುವುದು ನಿನಗೆ ಸಂತೋಷವೇ? ನಿನ್ನ ಸೃಷ್ಟಿಯ ಬಗ್ಗೆ ನೀನು ಚಿಂತಿಸದಂತೆ ತೋರುತ್ತಿದೆ. ದುಷ್ಟರ ಆಲೋಚನೆಗಳಲ್ಲಿ ನಿನಗೆ ಸಂತೋಷವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರೇ, ನಿಮ್ಮ ಕೈಕೃತಿಯಾಗಿರುವ ನನ್ನನ್ನು ಜಜ್ಜುವುದೂ ನಿಮಗೆ ಮೆಚ್ಚಿಕೆಯೋ? ನೀವು ನನ್ನನ್ನು ಅಲಕ್ಷ್ಯ ಮಾಡುವಿರೋ? ನೀವು ದುಷ್ಟರ ಯೋಜನೆಯನ್ನು ಮೆಚ್ಚುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:3
27 ತಿಳಿವುಗಳ ಹೋಲಿಕೆ  

ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.


ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.


ನೀನು ಕರೆದರೆ ಉತ್ತರಕೊಡುವೆನು, ನೀನು ಸೃಷ್ಟಿಸಿದ ನನ್ನ ಮೇಲೆ ನಿನಗೆ ಪ್ರೀತಿ ಹುಟ್ಟೀತು.


ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.


ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.


ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?


“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.


ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!


ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವುದಿಲ್ಲ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!


ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?


ಎಲ್ಲಾ ಒಂದೇ. ಆದಕಾರಣ ‘ನಾನು, ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ’ ಎಂದು ಹೇಳುತ್ತಾನೆ.


ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ, ಕೆಡುಕರನ್ನು ಕೈಹಿಡಿಯುವುದಿಲ್ಲ.


ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ, ಈಗ ಮನಸ್ಸನ್ನು ಬೇರೆ ಮಾಡಿಕೊಂಡು ನನ್ನನ್ನು ನಾಶ ಮಾಡಿಬಿಡುವೆಯಾ?


ದೇವರು ನನ್ನನ್ನು ಅಪರಿಶುದ್ಧರಿಗೆ ಒಪ್ಪಿಸಿ, ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾನೆ.


ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.


“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ (ಕೇಳಿರಿ)!


ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದಿ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತಿ.


ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಗರ್ಭದಲ್ಲಿ ರೂಪಿಸಿದನಲ್ಲವೇ.


ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನಾದ ದೇವರ ಶ್ವಾಸದಿಂದುಂಟಾಗಿದೆ.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.


ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು