Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನೇ ವ್ಯರ್ಥ ಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡು ಹಿಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆತ ದುರುಳರನು ಗುರುತು ಹಚ್ಚುತ್ತಾನೆ ನೆರವಿಲ್ಲದೆ ಅಕ್ರಮವನು ಕಂಡುಹಿಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನೇ ವ್ಯರ್ಥಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡುಹಿಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಯೋಗ್ಯರು ಯಾರೆಂಬುದು ದೇವರಿಗೆ ಚೆನ್ನಾಗಿ ಗೊತ್ತಿದೆ. ಆತನು ಕೆಟ್ಟದ್ದನ್ನು ಕಂಡಾಗ ಗಮನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಖಂಡಿತವಾಗಿ ದೇವರು ಮೋಸಗಾರರನ್ನು ಗುರುತಿಸುತ್ತಾರೆ; ದೇವರು ದುಷ್ಟತನವನ್ನು ನೋಡಿ ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:11
17 ತಿಳಿವುಗಳ ಹೋಲಿಕೆ  

ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?


ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ.


ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.


ಯೆಹೋವನೇ, ನೀನೇ ನೋಡಿದಿಯಲ್ಲವೇ; ಸುಮ್ಮನಿರಬೇಡ; ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ?


ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.


ಆತನೊಬ್ಬನೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ.


ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದುಕೊಳ್ಳುತ್ತಿದ್ದೆನು.


ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು