Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮರೆತುಬಿಡುವೆ ಆಗ ನಿನ್ನ ಕಷ್ಟದುಃಖವನ್ನು ನಿನ್ನ ನೆನಪಿಗೆ ಅದು ಹರಿದುಹೋದ ನೀರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೋಬನೇ, ಆಗ ನೀನು ನಿನ್ನ ಕಷ್ಟವನ್ನು ಮರೆತುಬಿಡುವೆ; ಹರಿದುಹೋದ ನೀರನ್ನೋ ಎಂಬಂತೆ ನಿನ್ನ ಕಷ್ಟಗಳನ್ನು ಜ್ಞಾಪಿಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಖಂಡಿತವಾಗಿ ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:16
12 ತಿಳಿವುಗಳ ಹೋಲಿಕೆ  

ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.


ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.


ಇಂಥವನು ತನ್ನ ಜೀವಮಾನದ ದಿನಗಳನ್ನು ಹೆಚ್ಚಾಗಿ ಗಣನೆಗೆ ತಂದುಕೊಳ್ಳುವುದಿಲ್ಲ. ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾನೆ.


“ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.


“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.


ಇದಲ್ಲದೆ ದಾರಿಕಾಣದಂತೆ ಕತ್ತಲೂ, ಮುಸುಕಿ ಜಲಪ್ರವಾಹವೂ ನಿನ್ನನ್ನು ಆವರಿಸುತ್ತವೆ.


ನನ್ನ ಸಹೋದರರಾದರೋ ತೊರೆಯ ಹಾಗೂ, ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.


ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ಮನಸ್ಸೆ” ಎಂದು ಹೆಸರಿಟ್ಟನು.


ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು