Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವುದಿಲ್ಲ. ಅನೇಕರು ನಿನ್ನ ಮುಖ ಪ್ರಸನ್ನತೆಯನ್ನು ಅಪೇಕ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ನೀನು ವಿಶ್ರಮಿಸುವೆ ಹೆದರಿಕೆಯಿಲ್ಲದೆ ಅನೇಕರಿಗೆ ಬೇಕಾಗುವುದು ನಿನ್ನ ಮುಖಪ್ರಸನ್ನತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವದಿಲ್ಲ. ಅನೇಕರು ನಿನ್ನ ಮುಖಪ್ರಸನ್ನತೆಯನ್ನು ಅಪೇಕ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ನೀನು ಮಲಗಿ ವಿಶ್ರಮಿಸಿಕೊಳ್ಳುವೆ; ಯಾರೂ ನಿನಗೆ ಭಯ ಹುಟ್ಟಿಸುವುದಿಲ್ಲ. ಅನೇಕರು ನಿನ್ನ ಸಹಾಯಕ್ಕಾಗಿಯೇ ಕೇಳಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಅನೇಕರು ನಿನ್ನಿಂದ ಮೆಚ್ಚಿಕೆಯನ್ನು ಅಪೇಕ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:19
17 ತಿಳಿವುಗಳ ಹೋಲಿಕೆ  

ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.


ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.


ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”


ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.


ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.


ನಿರೀಕ್ಷೆಗೆ ಆಸ್ಪದವಿರುವುದರಿಂದ ಧೈರ್ಯಗೊಂಡಿರುವಿ, ಸುತ್ತಲೂ ನೋಡಿ ಅಪಾಯವಿಲ್ಲವೆಂದು ವಿಶ್ರಮಿಸಿಕೊಳ್ಳುವಿ.


ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.


ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.


ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.


ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು. ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.


ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”


ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.


“‘ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡುವುದಿಲ್ಲ, ಕಾಡು ಮೃಗಗಳು ಅವರನ್ನು ತಿನ್ನುವುದಿಲ್ಲ; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು