Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆತ ಕೆಡವಿದ್ದನ್ನು ಯಾರಿಂದಲೂ ಕಟ್ಟಲಾಗದು ಆತ ಸೆರೆಹಿಡಿದವರನ್ನು ಯಾರಿಂದಲೂ ಬಿಡಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಗೋ, ಯಾರೂ ಕಟ್ಟದಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರು ಕೆಡವಿದ್ದನ್ನು ಮತ್ತೆ ಕಟ್ಟುವುದಕ್ಕಾಗಲಿ ಸೆರೆಗೆ ಹಾಕಿದವನನ್ನು ಬಿಡಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ಕೆಡವಿದ್ದನ್ನು ತಿರುಗಿ ಕಟ್ಟಲಾಗುವುದಿಲ್ಲ; ದೇವರು ಸೆರೆಯಲ್ಲಿ ಹಾಕುವ ಮನುಷ್ಯನನ್ನು ಯಾರೂ ಬಿಡಿಸಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:14
19 ತಿಳಿವುಗಳ ಹೋಲಿಕೆ  

“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.


ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.


ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.


ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು, ಪ್ರತಿಯೊಬ್ಬನ ಕೈಗಳನ್ನು ಬಲಪಡಿಸುತ್ತಾನೆ.


ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.


ದೇವರು ನನ್ನನ್ನು ಅಪರಿಶುದ್ಧರಿಗೆ ಒಪ್ಪಿಸಿ, ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾನೆ.


ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?


ಅಬೀಷೈಯು ದಾವೀದನಿಗೆ, “ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ” ಎಂದು ಹೇಳಿದನು.


ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.


ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ.


ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.


ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ.


“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.


ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ಹೊತ್ತು ಪ್ರಕಟವಾಯಿತು.


ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.


ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವುದಕ್ಕೆ ಯಾರಿಂದಾದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು