Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೋಡಿರಿ, ಆತನು ನೀರುಗಳನ್ನು ತಡೆದರೆ ಅವು ಬತ್ತಿಹೋಗುತ್ತವೆ; ಆತನು ನೀರುಗಳನ್ನು ಬಿಟ್ಟರೆ, ಅವು ಭೂಮಿಯನ್ನು ಹಾಳುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆತ ನೀರನ್ನು ತಡೆದರೆ, ಬತ್ತಿಹೋಗುತ್ತದೆ ಬೆಳೆಯೆಲ್ಲ ತೂಬೆತ್ತಿದರೆ ಮುಳುಗಿಹೋಗುತ್ತದೆ ಇಳೆಯೆಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೋಡಿರಿ, ಆತನು ನೀರುಗಳನ್ನು ತಡೆದರೆ ಅವು ಒಣಗುತ್ತವೆ; ಬಿಟ್ಟರೆ ಭೂವಿುಯನ್ನು ಹಾಳುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆತನು ಮಳೆಯನ್ನು ತಡೆಹಿಡಿದರೆ ಭೂಮಿಗೆ ಬರಗಾಲವಾಗುವುದು. ಮಳೆಯನ್ನು ಸುರಿಸಿದರೆ ಭೂಮಿಯ ಮೇಲೆ ಪ್ರವಾಹವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರು ಮಳೆಯನ್ನು ತಡೆಹಿಡಿಯುತ್ತಾರೆ, ಭೂಮಿ ಒಣಗುತ್ತದೆ; ದೇವರು ನೀರನ್ನು ಬಿಟ್ಟರೆ, ಭೂಮಿಯನ್ನು ಹಾಳುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:15
18 ತಿಳಿವುಗಳ ಹೋಲಿಕೆ  

ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.


ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.


ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!


ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.


ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.


ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.


ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.


ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.


ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.


ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿದನು.


ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿನಗಳಾದನಂತರ ಹಳ್ಳವು ಬತ್ತಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು