Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು, ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಮೃದ್ಧಿಯಾಗಿವೆ ಕಳ್ಳಕಾಕರ ಗುಡಾರಗಳು ಸುರಕ್ಷಿತವಾಗಿರುವರು ದೇವರನ್ನೆ ಕೆರಳಿಸುವವರು ಅಂಗೈಯಲ್ಲಿರುವುದೇ ಅವರಿಗೆ ದೇವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಜಾರಿಬಿದ್ದವರಿಗೆ ಅಪಮಾನವು ಕಾದಿರುತ್ತದೆ. ಕಳ್ಳರ ಗುಡಾರಗಳಾದರೋ ಸಮೃದ್ಧಿವಾಗಿರುವವು, ಕೈಯಲ್ಲಿರುವದನ್ನೇ ದೇವರನ್ನಾಗಿ ಮಾಡಿಕೊಂಡು ದೇವರನ್ನು ರೇಗಿಸುವವರು ಸುರಕ್ಷಿತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕಳ್ಳರ ಗುಡಾರಗಳಿಗೆ ತೊಂದರೆಯಿಲ್ಲ; ತಮ್ಮ ದೇವರುಗಳನ್ನು ಕೈಗಳಲ್ಲಿ ಎತ್ತಿಕೊಂಡು ಹೋಗುತ್ತಾ ದೇವರನ್ನು ರೇಗಿಸುವವರು ಸಮಾಧಾನದಿಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕಳ್ಳರ ಗುಡಾರಗಳು ವೃದ್ಧಿಯಾಗಿವೆ; ದೇವರನ್ನು ಕೆರಳಿಸುವವರು ನಿಶ್ಚಿಂತರಾಗಿದ್ದಾರೆ; ದೇವರೇ ತಮ್ಮ ಕೈಯಲ್ಲಿ ಇರುವುದಾಗಿ ತಿಳಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:6
17 ತಿಳಿವುಗಳ ಹೋಲಿಕೆ  

ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?


ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ.


ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.


ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.


ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!


ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬುದು ನೆಮ್ಮದಿಯಿಂದಿರುವವನ ಯೋಚನೆ; ಜಾರಿ ಬಿದ್ದವರಿಗೆ ಅಪಮಾನವು ಕಾದಿರುತ್ತದೆ.


ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ ಮಾಡುವವು; ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು;


ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.


ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?


ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!


ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು ಸೊಕ್ಕಿನವರ ಮೇಲೆ ಉರಿಗೊಂಡೆನು.


ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.


ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು