Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು, ತಿಳಿಯುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸತ್ತು ಮಲಗಿದ ಮನುಜ ಏಳುವಂತಿಲ್ಲ. ಅಳಿದುಹೋದರೂ ಆಕಾಶಮಂಡಲ ಅವನು ಎಚ್ಚರಗೊಳ್ಳುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದುಹೋಗುವ ತನಕ ಅವರು ನಿದ್ರೆತಿಳಿಯುವದಿಲ್ಲ, ಎಬ್ಬಿಸಲ್ಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸತ್ತ ಮನುಷ್ಯನು ಮಲಗಿಕೊಂಡೇ ಇರುವನು. ಅವನು ಮತ್ತೆ ಮೇಲೇಳುವುದಿಲ್ಲ. ಆಕಾಶವು ಅಳಿದುಹೋಗುವವರೆಗೆ ಅವನು ನಿದ್ರೆಯಿಂದ ಎಬ್ಬಿಸಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮನುಷ್ಯನು ಸತ್ತು ಮಲಗಿದರೆ ಏಳುವುದೇ ಇಲ್ಲ; ಆಕಾಶಗಳು ಅಳಿದು ಹೋಗುವವರೆಗೆ ಅವನು ಎಚ್ಚರಗೊಳ್ಳುವುದಿಲ್ಲ; ನಿದ್ರೆಯಿಂದ ಎಬ್ಬಿಸಲಾಗುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:12
26 ತಿಳಿವುಗಳ ಹೋಲಿಕೆ  

ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.


ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.


ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


“ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.


ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,


ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.


ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು.


ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.


ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.


ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ.


ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು