Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ; ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇಮಿಸಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮಾನವನ ದಿನಗಳೆಷ್ಟೆಂದು ತೀರ್ಮಾನವಾಗಿದೆ ಅವನ ತಿಂಗಳುಗಳ ಲೆಕ್ಕ ನಿನಗೆ ಗೊತ್ತಿದೆ ನೀ ನೇಮಿಸಿರುವೆ ಅವನಿಗೆ ದಾಟಲಾಗದ ಗಡಿಗಳನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮನುಷ್ಯನ ದಿನಗಳು ಇಷ್ಟೇ ಎಂಬದು ತೀರ್ಮಾನವಾಗಿದೆಯಲ್ಲಾ, ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇವಿುಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮನುಷ್ಯನ ದಿನಗಳು ಇಷ್ಟೇ ಎಂದು ನಿರ್ಣಯವಾಗಿದೆ; ಅವನ ತಿಂಗಳುಗಳನ್ನು ನೀನು ನಿರ್ಣಯಿಸಿರುವೆ. ಅವನ ಆಯುಷ್ಯಕ್ಕೆ ದಾಟಲಾರದ ಮೇರೆಯನ್ನು ಹಾಕಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮನುಷ್ಯನ ದಿನಗಳು ಇಷ್ಟೇ ಎಂದು ತೀರ್ಮಾನವಾಗಿದೆ; ಅವನ ತಿಂಗಳುಗಳ ಲೆಕ್ಕ ದೇವರೇ ನಿಮ್ಮ ಬಳಿಯಲ್ಲಿ ಇದೆ; ಅವನು ದಾಟಲಾರದ ಹಾಗೆ ಅವನಿಗೆ ಮೇರೆಗಳನ್ನು ನೇಮಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:5
24 ತಿಳಿವುಗಳ ಹೋಲಿಕೆ  

“ಯೆಹೋವನೇ, ನನಗೆ ಅವಸಾನವುಂಟೆಂದೂ, ನನ್ನ ಜೀವಮಾನವು ಅತ್ಯಲ್ಪವೆಂದೂ, ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,


ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,


ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.


ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.


ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?


“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.


ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ.


ಜಲರಾಶಿಗಳು ಬಂದು ಪುನಃ ಭೂಮಿಯನ್ನು ಮುಚ್ಚಿಕೊಳ್ಳದ ಹಾಗೆ, ನೀನು ಮೇರೆಗಳನ್ನು ಗೊತ್ತುಮಾಡಿದಿ.


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.


ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.


“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.


ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.


ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟದ್ದನ್ನು ಕಿತ್ತುಹಾಕುವ ಸಮಯ,


ಇದಲ್ಲದೆ ದಾವೀದನು, “ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು.


ನಾನು ಹಿಂದಿರುಗದ ದಾರಿಯನ್ನು, ಕೆಲವು ವರ್ಷಗಳೊಳಗೆ ಹಿಡಿಯುವೆನು.”


ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು