Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಾದ ದೇವರ ಎದುರು ನಿಂತು ಶೂರನಂತೆ ಮೆರೆದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದೇವರಿಗೆ ವಿರುದ್ಧ ಅವನು ಮುಷ್ಠಿ ತೋರಿದನಲ್ಲವೆ? ಸರ್ವಶಕ್ತನನು ಧಿಕ್ಕರಿಸುತಾ ಶೂರನಂತೆ ಮೆರೆದನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಿಗೆ ಎದುರು ನಿಂತು ಶೂರನಂತೆ ಮೆರೆದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯಾಕೆಂದರೆ ದುಷ್ಟನು ದೇವರಿಗೆ ವಿರುದ್ಧವಾಗಿ ತನ್ನ ಕೈಯನ್ನು ಝಳಪಿಸುತ್ತಾನೆ. ದುಷ್ಟನು ಸರ್ವಶಕ್ತನಾದ ದೇವರ ವಿರುದ್ಧವಾಗಿ ಮಹಾಶೂರನಂತೆ ಆಕ್ರಮಣ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಏಕೆಂದರೆ ದುಷ್ಟನು ದೇವರಿಗೆ ವಿರೋಧವಾಗಿ ಮುಷ್ಠಿ ತೋರಿಸಿದನಲ್ಲಾ, ಸರ್ವಶಕ್ತರ ಎದುರು ನಿಂತು ಶೂರನಂತೆ ಮೆರೆದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:25
28 ತಿಳಿವುಗಳ ಹೋಲಿಕೆ  

“ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ?


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು.


“ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.


ಆತನು ಅವರ ದುಷ್ಕೃತ್ಯವನ್ನೂ, ಸೊಕ್ಕಿನ ದ್ರೋಹಗಳನ್ನೂ ಅವರಿಗೆ ತೋರಿಸುವನು.


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ಐಗುಪ್ತರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವುದೇಕೆ? ಇಸ್ರಾಯೇಲ್ಯರನ್ನು ಕಳುಹಿಸಲೊಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು.


ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು;


ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.


ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ.


“ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ,


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?


ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು.


ದೊಡ್ಡ ಬಲವುಳ್ಳ ಗುರಾಣಿಯನ್ನು ಹಿಡಿದು ತಲೆ ನಿಮಿರಿಸಿ ಆತನ ಮೇಲೆ ಬೀಳಬೇಕೆಂದು ಓಡಿದನು.


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?


ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.


“ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.


ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!


“ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.


ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು