Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಪಾಪವೆ ನಿನಗೆ ಮಾತನು ಕಲಿಸಿಕೊಟ್ಟಿದೆ ಕಪಟಿಗಳಾಡುವ ನುಡಿಯನೆ ನೀನು ಆರಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಪಾಪವೇ ನಿನ್ನ ಬಾಯಿಗೆ [ಮಾತುಗಳನ್ನು] ಕಲಿಸಿಕೊಡುತ್ತದೆ, ಯುಕ್ತಿವಂತರ ಭಾಷೆಯನ್ನು ಆರಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ಪಾಪವೇ ನಿನ್ನ ಮಾತುಗಳಿಗೆ ಪ್ರೇರಕವಾಗಿವೆ. ನೀನು ಮೋಸಕರವಾದ ಮಾತುಗಳನ್ನು ಬಳಸುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ನಿನ್ನ ಪಾಪವೇ ನಿನ್ನ ಬಾಯಿಯನ್ನು ಪ್ರೇರೇಪಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆಯ್ದುಕೊಳ್ಳುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:5
19 ತಿಳಿವುಗಳ ಹೋಲಿಕೆ  

ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.


ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.


ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.


ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡಿದುಕೊಂಡು, ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.


ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು, ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು.


ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.


ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ, ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!


ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡುತ್ತಿರುವೆ, ನೀನು ನನ್ನನ್ನು ಪಾತಾಳಕ್ಕೆ ತಳ್ಳಿ ನನ್ನ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ.


ನಿನ್ನ ಕೆಟ್ಟತನವು ಬಹಳವಲ್ಲವೇ? ನಿನ್ನ ಪಾಪಗಳಿಗೆ ಮಿತಿಯೇ ಇಲ್ಲವಲ್ಲಾ?


ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.


ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು