Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನೂ ನಿಮ್ಮ ಹಾಗೆ ಮಾತನಾಡಬಲ್ಲೆನು; ನಾನು ನಿಮ್ಮಂತೆ ಇದ್ದಿದ್ದರೆ, ನಾನು ನಿಮ್ಮ ವಿರುದ್ಧವಾಗಿ ಮಾತುಗಳನ್ನು ಹೆಣೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನ್ನ ಸ್ಥಿತಿಯಲ್ಲಿ ನೀವಿದ್ದಿದ್ದರೆ ನಾನೂ ಮಾತಾಡಬಹುದಿತ್ತು ನಿಮ್ಮಂತೆ. ನಿಮಗೆ ವಿರುದ್ಧ ನಾನೂ ಮಾತೂ ಬೆಳೆಸಬಹುದಿತ್ತು ನಿಮ್ಮ ವಿಷಯದಲ್ಲಿ ನಾನೂ ತಲೆಯಾಡಿಸಬಹುದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನೂ ನಿಮ್ಮ ಹಾಗೆ ಮಾತಾಡಬಲ್ಲೆನು; ನೀವು ನನ್ನ ಸ್ಥಿತಿಯಲ್ಲಿ ಇದ್ದಿದ್ದರೆ ನಾನು ನಿಮಗೆ ವಿರುದ್ಧವಾಗಿ ಮಾತುಗಳನ್ನು ಹೊಸೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮಗೆ ನನ್ನ ಸ್ಥಿತಿಯು ಬಂದಿದ್ದರೆ ನೀವು ಹೇಳಿದ್ದನ್ನೇ ನಾನು ಹೇಳಬಹುದಾಗಿತ್ತು. ನಿಮಗೆ ವಿರುದ್ಧವಾಗಿ ಜ್ಞಾನದ ಮಾತುಗಳನ್ನು ಹೇಳಿ ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ನನ್ನ ಸ್ಥಿತಿಯಲ್ಲಿ ಇದ್ದಿದ್ದರೆ, ನಾನು ಸಹ ನಿಮ್ಮ ಹಾಗೆ ಮಾತಾಡುತ್ತಿದ್ದೆ; ನಾನು ನಿಮ್ಮ ವಿರುದ್ಧ ಪದಪ್ರಯೋಗಿಸಿ ಮಾತಾಡಬಹುದಾಗಿತ್ತು; ಹೌದು, ನಿಮ್ಮ ವಿಷಯದಲ್ಲಿ ಗೇಲಿ ಮಾಡುತ್ತಾ, ನಾನು ನನ್ನ ತಲೆಯಾಡಿಸಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:4
21 ತಿಳಿವುಗಳ ಹೋಲಿಕೆ  

ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.


ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,


ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.


ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.


ಯೆಹೋವನು ಅವನನ್ನು ಕುರಿತು, “ಕನ್ನಿಕೆಯಾಗಿರುವ ಚೀಯೋನಿನ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ. ಯೆರೂಸಲೇಮಿನ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.


ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.


ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.


ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.


ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ.


ಯೋಬನು ಸುಮ್ಮನೆ ಬಾಯಿ ತೆರೆಯುತ್ತಾನೆ, ಯಾವ ತಿಳಿವಳಿಕೆಯೂ ಇಲ್ಲದೆ ಬಹಳ ಮಾತನಾಡುತ್ತಾನೆ.”


“ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ? ವ್ಯರ್ಥವಾಗಿ ಮಾತನಾಡುವವ ನೀತಿವಂತನೆಂದು ಹೇಳಿಸಿಕೊಂಡಾನೇ?


ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ; ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.


ನಾನೂ ಬಾಯಿಮಾತಿಗಾಗಿ ನಿಮ್ಮನ್ನು ಧೈರ್ಯಗೊಳಿಸಿ, ತುಟಿಗಳ ಆದರಣೆಯಿಂದ ನಿಮ್ಮ ದುಃಖವನ್ನು ಶಮನಪಡಿಸಬಹುದಾಗಿತ್ತು.


ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, ‘ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.


ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?


“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು