Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸುತ್ತಲಿನ ಅಪಾಯಗಳು ಅವನನ್ನು ಹೆದರಿಸುತ್ತವೆ ಅವನ ಹಿಮ್ಮಡಿ ತುಳಿಯುತ್ತಾ ಅವು ಬೆನ್ನು ಹತ್ತುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಅಂಜಿಸಿ ಹಿಮ್ಮಡಿತುಳಿಯುತ್ತಾ ಬೆನ್ಹತ್ತುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:11
22 ತಿಳಿವುಗಳ ಹೋಲಿಕೆ  

ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.


ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲು ದಿಗಿಲು.


“ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”


ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.


ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಹೊರಬರುವುದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವುದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು.


“ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.


ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.


ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.


ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.


ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.


ಸರ್ವಶಕ್ತನಾದ ದೇವರ ಬಾಣಗಳು ನನ್ನಲ್ಲಿ ನಾಟಿರುತ್ತವೆ, ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರುದ್ಧವಾಗಿ ವ್ಯೂಹಕಟ್ಟಿವೆ.


ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗಾಗಿ ಹೊಂಚಿಕೊಂಡಿರುವವು.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು.


ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ವಿಸ್ಮಯಗೊಂಡರು.


ಅವನು ಫಿಲಿಷ್ಟಿಯರ ಪಾಳೆಯವನ್ನು ಕಂಡು ಬಹಳ ಭಯದಿಂದ ಎದೆಯೊಡೆದವನಂತಾದನು.


ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ, ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ.


ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು