Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ ಲೋಕದಿಂದಲೇ ಅಟ್ಟಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜನರು ಅವನನ್ನು ಬೆಳಕಿನಿಂದ ತಳ್ಳಿಬಿಡುವರು; ಅವನನ್ನು ಕತ್ತಲೆಯೊಳಗೆ ನೂಕಿಬಿಡುವರು. ಅವರು ಅವನನ್ನು ಲೋಕದಿಂದಲೇ ಅಟ್ಟಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:18
17 ತಿಳಿವುಗಳ ಹೋಲಿಕೆ  

ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.


ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ, ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ, ಅದರ ಬೆಳಕು ರಾತ್ರಿಯ ಬೆಳಕಿನಂತೆ.”


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.


ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.


ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು, ಮಧ್ಯಾಹ್ನದಲ್ಲೇ ರಾತ್ರಿಯವರಂತೆ ತಡಕಾಡುತ್ತಾರೆ.


ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?


ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು.


ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವುದು, ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ, ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದು ಬಿಡುವುದು.


ಮೂಡಣ ಗಾಳಿಯು ಕೊಚ್ಚಿಕೊಂಡು ಹೋಗುವುದರಿಂದ ಅವನು ಹಾರಿ ಹೋಗುವನು, ಅದು ಅವನನ್ನು ಬಡಿದು ಅವನ ಸ್ಥಳದಿಂದ ದೂರಮಾಡುವುದು.


ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.”


ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು; ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು.


“ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು