Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವನ ಬಿರುಸಾದ ಹೆಜ್ಜೆಗಳು ಜಡವಾಗುವುವು ಅವನು ಹಾಕಿದ ಯೋಜನೆಗಳು ಅವನನ್ನೆ ಕೆಡವಿಹಾಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನ ಬಲವುಳ್ಳ ಹೆಜ್ಜೆಗಳಿಗೆ ಇಕ್ಕಟ್ಟಾಗುವದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನ ಹೆಜ್ಜೆಗಳಲ್ಲಿ ಬಲವಿರುವುದಿಲ್ಲ; ಅವನ ದುಷ್ಟ ಯೋಜನೆಗಳೇ ಅವನನ್ನು ಬೀಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನ ಬಲವುಳ್ಳ ಹೆಜ್ಜೆಗಳು ದುರ್ಬಲಗೊಳ್ಳುವುದು; ಅವನ ಯೋಜನೆಗಳೇ ಅವನನ್ನು ಕೆಡವಿಹಾಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:7
15 ತಿಳಿವುಗಳ ಹೋಲಿಕೆ  

ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಅಡ್ಡಿಯಾಗುವುದಿಲ್ಲ, ಓಡಿದರೆ ಮುಗ್ಗರಿಸುವುದಿಲ್ಲ.


ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಪಾದಗಳು ಕದಲುವುದಿಲ್ಲ.


ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”


ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು.


ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ, ಇಕ್ಕಟ್ಟಿಲ್ಲದ ವಿಶಾಲ ಸ್ಥಳಕ್ಕೆ ಬರಮಾಡಬೇಕೆಂದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬುದು ಆತನ ಉದ್ದೇಶವಾಗಿದೆ.


ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು. ಶ್ರಮೆಯನ್ನು ಅನುಭವಿಸುವ ಪ್ರತಿಯೊಬ್ಬನ ಕೈ ಅವನ ಮೇಲೆ ಬೀಳುವುದು.


ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಮಾತುಗಳು ಕೂಡ ನಿನಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ, ನಿನ್ನನ್ನು ಅಪರಾಧಿಯನ್ನಾಗಿಸುತ್ತದೆ.


ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.


ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಧಿಪತಿಗಳನ್ನು ಕರೆದು ಅವರನ್ನು, “ನಮ್ಮವರಲ್ಲಿ ಇಸ್ರಾಯೇಲರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಿದನು.


ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.


ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು, ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು