Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ವಿರುದ್ಧವಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಂಡು ನನಗಾದ ಅವಮಾನವನ್ನು ನ್ಯಾಯವೆಂದು ಸ್ಥಾಪಿಸುವುದಕ್ಕೆ ನಿಜವಾಗಿ ಇಷ್ಟಪಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನಗಿಂತ ನೀವೇ ಮೇಲೆಂದು ಭಾವಿಸುತ್ತೀರೋ? ನನ್ನ ದೀನ ಸ್ಥಿತಿಗೆ ನನ್ನ ದೋಷವೇ ಕಾರಣವೆನ್ನುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನಗೆ ವಿರುದ್ಧವಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಂಡು ನನಗಾದ ಅವಮಾನವನ್ನು ನ್ಯಾಯವೆಂದು ಸ್ಥಾಪಿಸುವದಕ್ಕೆ ನಿಜವಾಗಿ ಇಷ್ಟಪಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮನ್ನು ನನಗಿಂತಲೂ ಉತ್ತಮರೆಂದು ತೋರಿಸಿಕೊಳ್ಳಬೇಕೆಂದಿದ್ದೀರಿ; ನನ್ನ ತೊಂದರೆಗಳೇ ನನ್ನನ್ನು ದೋಷಿಯೆಂದು ನಿರೂಪಿಸುತ್ತವೆಯೆಂದು ಭಾವಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ನನಗಿಂತ ಉತ್ತಮರು ಎಂದು ಭಾವಿಸುತ್ತಿದ್ದೀರಿ; ನನಗಾದ ಹೀನಸ್ಥಿತಿಯನ್ನು ನನಗೆ ವಿರೋಧವಾಗಿ ಉಪಯೋಗಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:5
16 ತಿಳಿವುಗಳ ಹೋಲಿಕೆ  

ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.


“ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು.


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.


ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.


“ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು.


ದಾವೀದ ವಂಶದವರ ಮಹಿಮೆಯೂ, ಯೆರೂಸಲೇಮಿನವರ ಮಹಿಮೆಯೂ, ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;


ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು!


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.


ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.


ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.


ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.


ನಾನು ನಿಜವಾಗಿ ತಪ್ಪುಮಾಡಿದ್ದರೆ ಆ ತಪ್ಪು ನನ್ನದೇ.


ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು