Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತೇಮಾನ್ಯನಾದ ಎಲೀಫಜನು ಶೂಹ್ಯನಾದ ಬಿಲ್ದದನು ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ - ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತಯಿಸೋಣ ಬನ್ನಿರಿ ಎಂದು ಗೊತ್ತುಮಾಡಿಕೊಂಡು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೋಬನ ಮೂವರು ಸ್ನೇಹಿತರು, ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಅವನಿಗೆ ಬಂದ ಈ ಎಲ್ಲಾ ಕಷ್ಟನಷ್ಟವನ್ನು ಕುರಿತು ಕೇಳಿ, ಯೋಬನಿಗೆ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸುವುದಕ್ಕೆ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡು, ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:11
34 ತಿಳಿವುಗಳ ಹೋಲಿಕೆ  

ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ, ಎಲ್ಲಾ ಅಕ್ಕತಂಗಿಯರೂ, ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.


ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ; ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.


ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.


ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.


“ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ, ನೀವೆಲ್ಲರೂ ಬೇಸರಿಕೆಯನ್ನು ಹುಟ್ಟಿಸುವ ಮಾತನಾಡುವಿರಿ. ಆದರಣೆಗೆ ಬದಲಾಗಿ ಬಾಧಿಸುವವರು ನೀವು.


ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು.


ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ ಎಂಬವರು. ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರನ್ನು ಪಡೆದನು.


ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.


ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,


ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್,


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.


ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ? ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ. ನಾನು ನಿನ್ನನ್ನು ಹೇಗೆ ಸಂತೈಸಲಿ?


ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.


ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.


ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು, “ನಿನ್ನ ಮೇಲೆಯೂ, ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀನು ಆಡಲಿಲ್ಲ.


ನನ್ನ ಆಪ್ತಮಿತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ.


ಆಗ ಶೂಹ್ಯನಾದ ಬಿಲ್ದದನು ಪ್ರತ್ಯುತ್ತರವಾಗಿ ಹೀಗೆಂದನು,


ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ, ನಾನಾದರೋ ದೇವರ ಮುಂದೆ ಕಣ್ಣೀರು ಸುರಿಸುತ್ತಿರುವೆನು.


ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,


ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥ ವೈದ್ಯರೇ.


“ಆಗ ಶೂಹ್ಯನಾದ ಬಿಲ್ದದನು ಹೀಗೆಂದನು,


ಯೋಬಾಬನು ಸತ್ತ ಮೇಲೆ ತೇಮಾನೀಯರ ದೇಶದವನಾದ ಹುಷಾಮನು ಆಳ್ವಿಕೆ ಮಾಡಿದನು.


ಆದುದರಿಂದ ಇವರ ತಂದೆಯಾದ ಎಫ್ರಾಯೀಮನು ಬಹುದಿನಗಳವರೆಗೂ ದುಃಖಪಡುತ್ತಿದ್ದನು. ಅವನ ಸಹೋದರರು ಅವನನ್ನು ಸಂತೈಸುವುದಕ್ಕೋಸ್ಕರ ಬಂದರು.


ಆಗ ತೇಮಾನ್ಯನಾದ ಎಲೀಫಜನೂ, ಶೂಹ್ಯನಾದ ಬಿಲ್ದದನೂ, ನಾಮಾಥ್ಯನಾದ ಚೋಫರನೂ ಹೋಗಿ ಯೆಹೋವನು ತಮಗೆ ಆಜ್ಞಾಪಿಸಿದ ಪ್ರಕಾರ ಮಾಡಲು ಯೆಹೋವನು ಯೋಬನ ವಿಜ್ಞಾಪನೆಯನ್ನು ಲಾಲಿಸಿದನು.


ತೇಮಾನ್ ಪಟ್ಟಣವೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವನ ಪರ್ವತದೊಳಗೆ ನಿರ್ಮೂಲರಾಗುವರು.


ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು.


ಮಕ್ಕೇದಾ, ಎಂಬ ಹದಿನಾರು ಪಟ್ಟಣಗಳೂ, ಅವುಗಳ ಗ್ರಾಮಗಳು.


ಅದಕ್ಕೆ ತೇಮಾನ್ಯನಾದ ಎಲೀಫಜನು ಹೀಗೆ ಉತ್ತರಕೊಟ್ಟನು,


ಆಗ ನಾಮಾಥ್ಯನಾದ ಚೋಫರನು ಹೀಗೆಂದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು