Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:3
26 ತಿಳಿವುಗಳ ಹೋಲಿಕೆ  

ಆಗ ಯೆಹೋವನು, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ, ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ” ಎಂದು ಸೈತಾನನಿಗೆ ಹೇಳಿದನು.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.


ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.


ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ, ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ,


ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ.


ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.


ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.


ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು.


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.


ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.


ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು.


ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.


ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.


ಅದಕ್ಕೆ ಯೋವಾಬನು, “ನುಂಗಿಬಿಡುವುದಾಗಲಿ, ಹಾಳುಮಾಡುವುದಾಗಲಿ ನನಗೆ ದೂರವಾಗಿರಲಿ ಅಂಥದ್ದು ಬೇಡವೇ ಬೇಡ.


ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ಯೆಹೋವನು, “ಎಲ್ಲಿಂದ ಬಂದೆ?” ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದನು.


ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.


ಒಂದು ದಿನ ದೇವದೂತರು ಯೆಹೋವನ ಸನ್ನಿಧಿಗೆ ಬರುವಾಗ ಸೈತಾನನು (ಆಪಾದಕ ದೂತನು) ಅವರ ಜೊತೆಯಲ್ಲಿ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು