Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಸೈತಾನನಿಗೆ, “ನೋಡು, ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದೇನೆ. ಅವನ ಪ್ರಾಣವನ್ನು ಉಳಿಸಬೇಕು” ಎಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಸರ್ವೇಶ್ವರ ಸೈತಾನನಿಗೆ, “ಸರಿ, ಆತನನ್ನು ನಿನ್ನ ಕೈಗೆ ಬಿಟ್ಟಿದ್ದೇನೆ. ಆದರೆ ಆತನ ಪ್ರಾಣವನ್ನು ಮಾತ್ರ ಮುಟ್ಟಕೂಡದು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಸೈತಾನನಿಗೆ - ಅವನು ನಿನ್ನ ಕೈಯಲ್ಲಿದ್ದಾನೆ, ನೋಡು; ಅವನ ಪ್ರಾಣವನ್ನಾದರೋ ಉಳಿಸಲೇಬೇಕು ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದಕ್ಕೆ ಯೆಹೋವನು ಸೈತಾನನಿಗೆ, “ಸರಿ, ಯೋಬನನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ; ಆದರೆ ಅವನ ಪ್ರಾಣವನ್ನು ಮಾತ್ರ ತೆಗೆಯಬೇಡ” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋವ ದೇವರು ಸೈತಾನನಿಗೆ, “ಹಾಗಾದರೆ ಅವನು ನಿನ್ನ ಕೈಯಲ್ಲಿ ಇದ್ದಾನೆ. ಅವನ ಪ್ರಾಣವನ್ನು ಮಾತ್ರ ಮುಟ್ಟಬಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:6
15 ತಿಳಿವುಗಳ ಹೋಲಿಕೆ  

ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ಯೆಹೋವನು ಸೈತಾನನಿಗೆ, “ನೋಡು, ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ. ಆದರೆ ಅವನ ಮೈಮೇಲೆ ಮಾತ್ರ ಕೈಹಾಕಬೇಡ” ಎಂದು ಅಪ್ಪಣೆಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು.


ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.


ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸದೆ ಬಿಡುವುದಿಲ್ಲ” ಎಂದನು.


ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.


ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು.


ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.


ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು