Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಜೇನೂ, ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನು ನೋಡನು ಎಣ್ಣೆ ಹರಿವ ಕಾಲುವೆಗಳನು ಜೇನು ಹಾಲು ತುಂಬಿ ಹರಿವ ನದಿಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಜೇನೂ ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ದುಷ್ಟನು ಹಾಲೂಜೇನೂ ಹರಿಯುವ ನದಿಗಳನ್ನು ನೋಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಜೇನು, ಮೊಸರೂ ಹರಿಯುವ ಹಳ್ಳಗಳನ್ನೂ, ಸಮೃದ್ಧಿಯಾಗಿ ಹರಿಯುವ ನದಿಗಳನ್ನೂ ನೋಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:17
15 ತಿಳಿವುಗಳ ಹೋಲಿಕೆ  

‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.


ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.


ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,


ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.


ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.


ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು.


ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.


ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.


ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.


ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.


ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.


ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು