Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು. ಶ್ರಮೆಯನ್ನು ಅನುಭವಿಸುವ ಪ್ರತಿಯೊಬ್ಬನ ಕೈ ಅವನ ಮೇಲೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸಮೃದ್ಧಿಯಿಂದಿರುವಾಗಲೇ ಕೊರತೆ ಅವನನ್ನು ಕಾಡುವುದು ಶ್ರಮಜೀವಿಗಳೆಲ್ಲರ ಕೈ ಅವನ ಮೇಲೆ ಎರಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವದು. ಶ್ರಮೆಯನ್ನನುಭವಿಸುವ ಪ್ರತಿಯೊಬ್ಬನ ಕೈ ಅವನ ಮೇಲೆ ಬೀಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುಷ್ಟನು ಸಮೃದ್ಧಿಯಿಂದಿರುವಾಗಲೇ ಇಕ್ಕಟ್ಟಿನಿಂದ ಕುಗ್ಗಿಸಲ್ಪಡುವನು; ಅವನ ಕಷ್ಟಗಳು ಅವನ ಮೇಲೆ ಬೀಳುವವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವನ ಸಮೃದ್ಧಿಯಿಂದ ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು; ಘೋರ ದುಃಖವು ಅವನ ಮೇಲೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:22
13 ತಿಳಿವುಗಳ ಹೋಲಿಕೆ  

ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.


ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.


ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ


ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವುದು.


ದೇವರು ನನ್ನನ್ನು ಅಪರಿಶುದ್ಧರಿಗೆ ಒಪ್ಪಿಸಿ, ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾನೆ.


ಇಂಥವನು ಐಶ್ವರ್ಯವಂತನಾಗುವುದಿಲ್ಲ, ಅವನ ಆಸ್ತಿಯು ಸ್ಥಿರವಾಗಿ ನಿಲ್ಲದು. ಅವನ ಪ್ರತಿ ಫಲವು ಭಾರದಿಂದ ಭೂಮಿಯ ಕಡೆಗೆ ಬಾಗುವುದಿಲ್ಲ.


ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವುದು, ದಣಿದವರು ದಣಿವಾರಿಸಿಕೊಳ್ಳುವರು.


ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತ್ಯೆ ಮಾಡಿದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.


ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ಈ ಸುದ್ದಿಯನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದು ಹೇಳಿದನು.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.


ಹಸಿದವನು ಅವರ ಬೆಳೆಯನ್ನು ಮುಳ್ಳುಬೇಲಿಹಾಕಿದ್ದರೂ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬಾಯಿ ತೆರೆದು ಕಾದಿರುವರು.


ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು