Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತನ್ನ ಮಲದ ಹಾಗೆ ನಿತ್ಯನಾಶನವನ್ನೂ ಹೊಂದುವನು, ಅವನನ್ನು ಕಂಡವರು ಕೂಡ ‘ಅವನು ಎಲ್ಲಿ?’ ಎನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತನ್ನ ಮಲದ ಹಾಗೆ ನಿತ್ಯಕ್ಕು ಅವನು ನಶಿಸಿಹೋಗುವನು ಅವನನು ಅರಿತವರೆಲ್ಲರೂ “ಅವನೆಲ್ಲಿಯೋ!’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತನ್ನ ಮಲದ ಹಾಗೆ ನಿತ್ಯನಾಶನವನ್ನು ಹೊಂದುವನು, ಅವನನ್ನು ಕಂಡವರು ಕೂಡ ಅವನೆಲ್ಲಿಯೋ ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಅವನು ತನ್ನ ಮಲದ ಹಾಗೆ ನಿತ್ಯನಾಶವಾಗುವನು. ಅವನನ್ನು ಬಲ್ಲವರು, ‘ಅವನೆಲ್ಲಿ?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಗೊಬ್ಬರದ ಹಾಗೆ ಶಾಶ್ವತವಾಗಿ ಅವನು ನಾಶವಾಗುವನು; ಅವನನ್ನು ನೋಡಿದವರು, ‘ಅವನೆಲ್ಲಿ?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:7
16 ತಿಳಿವುಗಳ ಹೋಲಿಕೆ  

ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.


ಮನುಷ್ಯನಾದರೋ ಸತ್ತು ಬೋರಲುಬೀಳುವನು, ಪ್ರಾಣಹೋಗಲು ಅವನ ಅಂತ್ಯವಾಗುತ್ತದೆ.


ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು.


ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ಅವನನ್ನು ಅಲ್ಲಿಂದ ಕಿತ್ತು ಹಾಕಿದರೆ ಆ ಸ್ಥಳವು, ‘ನಿನ್ನನ್ನು ಕಾಣೆ’ ಎಂದು ಕೂಗುವುದು.


ಅವನು ತನ್ನ ಮನೆಗೆ ಪುನಃ ಸೇರುವುದಿಲ್ಲ, ಇನ್ನು ಮೇಲೆ ಅವನ ನಿವಾಸಕ್ಕೆ ಅವನ ಪರಿಚಯ ಇರುವುದಿಲ್ಲ.


ಉದಯಾಸ್ತಮಾನಗಳ ಮಧ್ಯದಲ್ಲಿ (ಜೀವಿಸಿ) ಜಜ್ಜಲ್ಪಡುತ್ತಾರೆ. ಹೀಗೆ ನಿತ್ಯನಾಶ ಹೊಂದುವುದನ್ನು ಯಾರೂ ಲಕ್ಷಿಸುವುದಿಲ್ಲ.


ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು. ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ.


ಅವನು ಧನಿಕನಾಗಿ ನಿದ್ರಿಸಿದರೂ ಮತ್ತೆ ನಿದ್ರೆಯನ್ನು ಕಾಣದೆ ಹೋಗುವನು, ತನ್ನ ಕಣ್ಣನ್ನು ತೆರೆಯುತ್ತಲೇ ಎಲ್ಲವೂ ಮಾಯವಾಗುತ್ತದೆ.


ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು. ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ನಿರ್ನಾಮವಾಗುವರು.


ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.


ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.


‘ಪ್ರಧಾನನ ಮನೆ ಏನಾಯಿತು? ದುಷ್ಟರು ವಾಸಿಸಿದ ಗುಡಾರವೆಲ್ಲಿ?’ ಎನ್ನುತ್ತೀರಷ್ಟೆ.


ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ.


ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು