Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೆ ಈ ದುರುಳರೇ, ದೇವರಿಗೆ, ‘ನಮ್ಮನ್ನು ಬಿಟ್ಟು ತೊಲಗು, ನಮಗೆ ಬೇಡವಾಗಿದೆ ನಿನ್ನ ಮಾರ್ಗದ ಅರಿವು’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಇವರೇ ದೇವರನ್ನು ಕುರಿತು - ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳುವಳಿಕೆಯೇ ನಮಗೆ ಬೇಡ ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ದುಷ್ಟರು ದೇವರಿಗೆ, ‘ನಮ್ಮನ್ನು ನಮ್ಮಷ್ಟಕ್ಕೇ ಬಿಟ್ಟುಕೊಡು! ನಿನ್ನ ಮಾರ್ಗದ ತಿಳುವಳಿಕೆಯೇ ನಮಗೆ ಬೇಡ’ ಎನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೂ ಇವರು ದೇವರಿಗೆ, ‘ನಮ್ಮನ್ನು ಬಿಟ್ಟುಬಿಡು, ನಿಮ್ಮ ಮಾರ್ಗಗಳ ತಿಳುವಳಿಕೆ ನಮಗೆ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:14
22 ತಿಳಿವುಗಳ ಹೋಲಿಕೆ  

ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು.


ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.


ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.


ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?


“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.


ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.


ಅವರು ಆತನನ್ನು ಹಿಂಬಾಲಿಸದೆ, ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯಮಾಡಿದ್ದರಷ್ಟೆ.


‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ.


ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.


ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.


ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.


ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು