Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ‘ಈ ಸರ್ವಶಕ್ತ ಎಷ್ಟರವನು : ಆತನ ಸೇವೆ ನಮಗೇಕೆ? ಆತನಿಗೆ ಪ್ರಾರ್ಥನೆಮಾಡಿ ಪ್ರಯೋಜನವೇನು?’ ಎಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಸರ್ವಶಕ್ತನು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆಮಾಡುವದರಿಂದ ಪ್ರಯೋಜನವೇನು? ಎಂದೂ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದುಷ್ಟರು, ‘ಸರ್ವಶಕ್ತನಾದ ದೇವರು ಯಾರು? ನಾವು ಆತನ ಸೇವೆಮಾಡುವ ಅಗತ್ಯವಿಲ್ಲ! ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸರ್ವಶಕ್ತರು ಯಾರು, ನಾವು ಅವರ ಸೇವೆ ಏಕೆ ಮಾಡಬೇಕು? ನಾವು ದೇವರಿಗೆ ಪ್ರಾರ್ಥನೆಮಾಡಿ ನಮಗೆ ಪ್ರಯೋಜನವೇನು?’ ಎಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:15
16 ತಿಳಿವುಗಳ ಹೋಲಿಕೆ  

ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.


‘ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ, ಅವನಿಗೆ ಯಾವ ಪ್ರಯೋಜನವೂ ಇಲ್ಲ’ ಎಂದು ಹೇಳಿದ್ದಾನಷ್ಟೆ.


ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.


ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.


ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.


ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.


ಈ ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು, ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತಿಯಾ?


“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;


ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.


ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.


ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು.


ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ.


ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.


ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?


ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು