Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ‘ದೇವರು ದುಷ್ಟನ ಪಾಪ ಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ’ ಎನ್ನುತ್ತೀರೋ, ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೆ ಕೊಟ್ಟುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದುಷ್ಟ ತಂದೆಯ ಪಾಪಫಲವನು ಮಕ್ಕಳಿಗೆ ಕಾದಿಟ್ಟಿದ್ದಾರೆಯೇ ದೇವರು? ಅವನಿಗೇ ಆ ದಂಡನೆ ಆಗಲಿ ಆ ದುಷ್ಟನೇ ಅದನ್ನು ಅನುಭವಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರು ದುಷ್ಟನ ಪಾಪಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ [ಅನ್ನುತ್ತೀರೋ?] ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೇನೆ ಕೊಟ್ಟುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ‘ದುಷ್ಟನ ಮಕ್ಕಳಿಗೆ ದೇವರು ದಂಡನೆಯನ್ನು ಶೇಖರಿಸಿಡುತ್ತಾನೆ’ ಎಂದು ನೀವು ಹೇಳುತ್ತೀರಿ. ಇಲ್ಲ! ದೇವರು ದುಷ್ಟನನ್ನೇ ದಂಡಿಸಲಿ. ಆಗ, ತನ್ನ ಸ್ವಂತ ಪಾಪಗಳಿಗಾಗಿ ತನಗೆ ದಂಡನೆಯಾಯಿತೆಂದು ಅವನು ತಿಳಿದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ‘ದೇವರು ದುಷ್ಟರ ಮಕ್ಕಳಿಗೆ ಅವರ ಅಪರಾಧ ಫಲವನ್ನು ಕಾದಿಡುತ್ತಾರೆ,’ ಎಂದು ಹೇಳುತ್ತಾರಲ್ಲಾ? ಆ ದುಷ್ಟರು ಅನುಭವಿಸುವ ಹಾಗೆ ದೇವರು ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:19
23 ತಿಳಿವುಗಳ ಹೋಲಿಕೆ  

ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


“ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”


‘ಹೆತ್ತವರು ಹುಳಿದ್ರಾಕ್ಷಿಯನ್ನು ತಿಂದರು, ಅದರಿಂದ ಮಕ್ಕಳ ಹಲ್ಲುಗಳು ಚಳಿತುಹೋಗಿವೆ’ ಎಂದು ಆ ಕಾಲದಲ್ಲಿ ಜನರು ಮತ್ತೆ ಹೇಳುವುದಿಲ್ಲ.


ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ, ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ.


ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


“ಇಗೋ, ಇವನು ಪಡೆದ ಮಗನು, ತನ್ನ ತಂದೆಯು ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು ಇಂಥಾ ಕಾರ್ಯಗಳನ್ನು ನಡೆಸದೆ,


ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.


ಇದನ್ನೆಲ್ಲಾ ನಾನು ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ ಅಲ್ಲವೇ?


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.


ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು.


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.


‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;


ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.


‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು