Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯಾವುದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವುದು, ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿನ್ನ ಯೋಜನೆಗಳು ಸಫಲವಾಗುವುವು ನಿನ್ನ ಮಾರ್ಗಗಳು ಪ್ರಜ್ವಲಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯಾವದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವದು, ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಿನ್ನ ಕಾರ್ಯಗಳೆಲ್ಲಾ ಜಯಪ್ರಧವಾಗುವುದು; ನಿನ್ನ ಭವಿಷ್ಯತ್ತು ಪ್ರಕಾಶಮಾನವಾಗುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀನು ಏನಾದರೂ ನಿರ್ಣಯಿಸಿದ್ದರೆ, ಅದು ನಿನಗೆ ನೆರವೇರುವುದು ಮತ್ತು ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:28
15 ತಿಳಿವುಗಳ ಹೋಲಿಕೆ  

ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.


ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.


ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.


ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.


ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.


ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.


ನಿನ್ನ ಜೀವಮಾನವು ಮಧ್ಯಾಹ್ನದ ಬೆಳಕಿಗಿಂತ ಹೆಚ್ಚಾಗಿ ಪ್ರಜ್ವಲಿಸುವುದು, ಕತ್ತಲಿದ್ದರೂ ಹಗಲಿನಂತಿರುವುದು.


ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು.


ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು