Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಬೆಳ್ಳಿಯನ್ನು ಧೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು, ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ ಧೂಳಿನಷ್ಟು, ವಸ್ತ್ರಗಳನು ಗುಡ್ಡೆ ಮಾಡಿಟ್ಟಿದ್ದರೂ ಮಣ್ಣಿನಷ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಬೆಳ್ಳಿಯನ್ನು ದೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದುಷ್ಟನು ಬೆಳ್ಳಿಯನ್ನು ಧೂಳಿನಂತೆ ರಾಶಿಮಾಡಿಕೊಂಡರೂ ಬಟ್ಟೆಗಳನ್ನು ಮಣ್ಣಿನ ರಾಶಿಗಳಂತೆ ಪಡೆದುಕೊಂಡರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದುಷ್ಟರು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ, ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿಕೊಂಡಿದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:16
15 ತಿಳಿವುಗಳ ಹೋಲಿಕೆ  

ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ.


“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.


ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.


“ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’


ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು.


ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು.


ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು.


ಇಂಥವನು ಐಶ್ವರ್ಯವಂತನಾಗುವುದಿಲ್ಲ, ಅವನ ಆಸ್ತಿಯು ಸ್ಥಿರವಾಗಿ ನಿಲ್ಲದು. ಅವನ ಪ್ರತಿ ಫಲವು ಭಾರದಿಂದ ಭೂಮಿಯ ಕಡೆಗೆ ಬಾಗುವುದಿಲ್ಲ.


ಅವನ ಮಕ್ಕಳು ದರಿದ್ರರ ದಯೆಯನ್ನು ಬೇಡುವರು. ಅವನು ತನ್ನ ಕೈಯಿಂದಲೇ ತನ್ನ ಆಸ್ತಿಯನ್ನು ಹಿಂದಕ್ಕೆ ಕೊಟ್ಟು ಬಿಡಬೇಕಾಗುವುದು.


ಅವನ ಮನೆಯವರಲ್ಲಿ ಯಾರಾದರೂ ಉಳಿದರೆ ವ್ಯಾಧಿಯು ಅವರನ್ನು ಮಣ್ಣಿಗೆ ಸೇರಿಸುವುದು, ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ.


ಆ ವಸ್ತ್ರಗಳನ್ನು ನೀತಿವಂತರು ಧರಿಸಿಕೊಳ್ಳುವರು. ಆ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ, ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಳಾದರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.


ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್ ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು