Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಗಾಳಿಯು ಕರುಣೆ ಇಲ್ಲದೆ ಅವನ ಮೇಲೆ ತನ್ನ ಬಾಣಗಳನ್ನು ಎಸೆಯುತ್ತಲಿರುವನು, ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇ ಬೇಕೆಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವನ ಮೇಲೆ ಅದು ಬೀಸುತ್ತದೆ ನಿರ್ದಾಕ್ಷಿಣ್ಯದಿಂದ ತಪ್ಪಿಸಿಕೊಳ್ಳಲು ಅವನು ಯತ್ನಿಸುತ್ತಾನೆ ಅದರ ಹೊಡೆತದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರು ಕರುಣವಿಲ್ಲದೆ ಅವನ ಮೇಲೆ [ತನ್ನ ಬಾಣಗಳನ್ನು] ಎಸೆಯುತ್ತಲಿರುವನು, ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇಬೇಕೆಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುಷ್ಟನು ಬಿರುಗಾಳಿಯ ಶಕ್ತಿಯಿಂದ ಓಡಿಹೋಗಲು ಪ್ರಯತ್ನಿಸುವನು. ಆದರೆ ಬಿರುಗಾಳಿಯು ಕರುಣೆಯಿಲ್ಲದೆ ಅವನಿಗೆ ಬಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:22
21 ತಿಳಿವುಗಳ ಹೋಲಿಕೆ  

ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?


ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.


ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.


ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.


ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಕಬ್ಬಿಣದ ಆಯುಧದ ದೆಸೆಯಿಂದ ಓಡಿಹೋಗುವನು, ತಾಮ್ರದ ಬಿಲ್ಲು ಅವನನ್ನು ಇರಿಯುವುದು.


ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”


ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರುದ್ಧವಾಗಿ ಪ್ರಯೋಗಿಸುವೆನು.


ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.


ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.


ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ?


ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು.


ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.


ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು