Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಭೂಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸುಜ್ಞಾನದ ಕ್ರಯ ಯಾರಿಗೂ ಗೊತ್ತಿಲ್ಲ ಜೀವಿತರಲ್ಲಿ ಅದನ್ನು ಕಂಡವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಜೀವಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜ್ಞಾನದ ಬೆಲೆಯು ಯಾರಿಗೂ ಗೊತ್ತಿಲ್ಲ. ಜನರು ನೆಲವನ್ನು ಅಗೆದು ಜ್ಞಾನವನ್ನು ಕಂಡುಕೊಳ್ಳಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ; ಜೀವಿಸುವವರಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:13
18 ತಿಳಿವುಗಳ ಹೋಲಿಕೆ  

ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?


ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.


ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.


ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.


ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.


ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲಿ ಒಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನು.


ಭೂಮಿಯ ಕೆಳಗಣ ಸಾಗರವು ನನ್ನಲ್ಲಿ ಇಲ್ಲ ಎನ್ನುವುದು, ಸಮುದ್ರವು, ತನ್ನ ಹತ್ತಿರ ಇಲ್ಲ ಎಂದು ಹೇಳುವುದು.


ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.


ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು