Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸುಜ್ಞಾನವಿರುವಲ್ಲಿ ಹವಳ-ಸ್ಫಟಿಕಗಳು ನೆನಪಿಗೆ ಬಾರವು ಮಾಣಿಕ್ಯಗಳ ಸಂಪಾದನೆಗಿಂತ ಅದರ ಸಂಪಾದನೆ ಶ್ರೇಷ್ಠವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 [ಜ್ಞಾನವಿರುವಲ್ಲಿ] ಹವಳವೂ ಸ್ಪಟಿಕವೂ ನೆನಪಿಗೆ ಬರುವದಿಲ್ಲ. ಮುತ್ತುಗಳನ್ನು ಸಂಪಾದಿಸುವದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವದು ಎಷ್ಟೋ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜ್ಞಾನವು ಹವಳಕ್ಕಿಂತಲೂ ಸ್ಪಟಿಕಕ್ಕಿಂತಲೂ ಹೆಚ್ಚು ಬೆಲೆ ಬಾಳುತ್ತದೆ. ಜ್ಞಾನವು ಮಾಣಿಕ್ಯಕ್ಕಿಂತಲೂ ಅಮೂಲ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:18
13 ತಿಳಿವುಗಳ ಹೋಲಿಕೆ  

ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.


“ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.


ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.


ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.


ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಷ್ಮೆ, ಕಡುಗೆಂಪು ಉಡುಪು ಸಕಲ ವಿಧವಾದ ಮರಮುಟ್ಟು ಮತ್ತು ದಂತದ ಸಾಮಾನುಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ. ಸುಗಂಧ ಸರಕುಗಳಾದ


ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.


ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ


“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.


ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.


ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು