Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದರಿದ್ರನಿಗೆ ತಂದೆಯಾಗಿದ್ದೆ ಅಪರಿಚಿತರ ವ್ಯಾಜ್ಯವನು ತೀರಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದರಿದ್ರರಿಗೆ ತಂದೆಯಾಗಿ ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಬಡವರಿಗೆ ತಂದೆಯಂತಿದ್ದೆನು. ತೊಂದರೆಯಲ್ಲಿದ್ದ ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದರಿದ್ರರಿಗೆ ನಾನು ತಂದೆಯಾಗಿದ್ದೆನು; ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:16
19 ತಿಳಿವುಗಳ ಹೋಲಿಕೆ  

ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.


ವಿಷಯವನ್ನು ರಹಸ್ಯವಾಗಿಡುವುದು ದೇವರ ಮಹಿಮೆ, ವಿಷಯವನ್ನು ವಿಮರ್ಶೆಮಾಡುವುದು ರಾಜರ ಹಿರಿಮೆ.


ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.


ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯ ರೀತಿಯಲ್ಲಿ ಅನಾಥನನ್ನು ಸಾಕುತ್ತಾ, ನಾನು ಹುಟ್ಟಿದಂದಿನಿಂದಲು ಅನಾಥಳಿಗೆ ದಾರಿತೋರಿಸುತ್ತಾ ಇದ್ದೇನಷ್ಟೆ.


ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ.


ಇವನು ಎಸ್ತೇರ್ ಎಂಬ ಹೆಸರಿನ ಹದೆಸ್ಸಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆತಾಯಿಗಳು ಸತ್ತಂದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಆಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.


ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.


ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂತಹ ಅಸಹ್ಯಕಾರ್ಯವು ಇಸ್ರಾಯೇಲರಲ್ಲಿ ನಡೆದದ್ದು


ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ಇಗೋ, ನೀನು ಅನೇಕರನ್ನು ಶಿಕ್ಷಿಸಿ, ಜೋಲು ಬಿದ್ದ ಕೈಗಳನ್ನು ಬಲಗೊಳಿಸಿದ್ದಿ.


ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.


ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬುದಾಗಿ ತನ್ನ ಹೆಂಡತಿ ಹೇಳಿದ ಮಾತುಗಳನ್ನು ಯೋಸೇಫನ ದಣಿಯು ಕೇಳಿದಾಗ ಬಹಳ ಸಿಟ್ಟುಗೊಂಡನು.


ಆಗ ಅರಸನು, “ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ” ಎಂದು ಹೇಳಿದನು.


ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ? ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೇನಷ್ಟೆ.


ನನ್ನ ಗುಡಾರದ ಆಳುಗಳು, ‘ನಮ್ಮ ಯಜಮಾನ ಬಡಿಸಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು’ ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?


ಪರಸ್ಥಳದವನು ಬಯಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೆಯ ಬಾಗಿಲುಗಳನ್ನು ತೆರೆದಿದ್ದೆನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು