Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ ಕಣ್ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಾಗಿಲ್ಲದಿದ್ದರೆ ನಾನು ಮಲಗಿ ಸುಮ್ಮನಿದ್ದು ನಿದ್ರೆಮಾಡುತ್ತಿದ್ದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಹುಟ್ಟಿದಾಗಲೇ ಸತ್ತುಹೋಗಿದ್ದರೆ, ಸಮಾಧಾನದಿಂದ ನಿದ್ರೆಮಾಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಸತ್ತಿದ್ದರೆ ನಾನು ಶಾಂತವಾಗಿ ಮಲಗಿಕೊಳ್ಳುತ್ತಿದ್ದೆನು; ನಾನು ವಿಶ್ರಾಂತಿಯಲ್ಲಿರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:13
22 ತಿಳಿವುಗಳ ಹೋಲಿಕೆ  

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ಒಬ್ಬನು ಸಮೃದ್ಧನಾಗಿ, ತುಂಬಾ ಸುಖದಿಂದಲೂ, ನೆಮ್ಮದಿಯಿಂದಲೂ ಇರುವಾಗ ಸಾಯುವನು.


ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು.


ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ.


ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ, ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ.


ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ, ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ, ಅದರ ಬೆಳಕು ರಾತ್ರಿಯ ಬೆಳಕಿನಂತೆ.”


ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.


ತಾಯಿಯ ಮಡಿಲು ನನ್ನನ್ನು ಹೊತ್ತದ್ದೇಕೆ? ತಾಯಿಯ ಮೊಲೆಗಳು ನನಗೆ ಕುಡಿಯ ಕೊಟ್ಟದ್ದೇಕೆ?


ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರೆನು.


ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು. ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ.


ನಾನು ಹಿಂದಿರುಗದ ದಾರಿಯನ್ನು, ಕೆಲವು ವರ್ಷಗಳೊಳಗೆ ಹಿಡಿಯುವೆನು.”


ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.


ಇಬ್ಬರೂ ಧೂಳಿನಲ್ಲಿ ಮಲಗುವರು, ಹುಳುಗಳು ಅವರನ್ನು ಮುತ್ತಿಕೊಳ್ಳುವವು.


ಬರಗಾಲವೂ, ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ, ಪಾತಾಳವು ಪಾಪಿಗಳನ್ನು ಎಳೆದುಕೊಳ್ಳುವುದು.


ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವುದು; ಹುಳವು ಅವನ ಹೆಣವನ್ನು ಸವಿದು ತಿನ್ನುವುದು; ಇನ್ನು ಮೇಲೆ ಯಾರಿಗೂ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವುದು.


ಅದಕ್ಕೆ ಬಿಲ್ದದನು, “ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ, ಪ್ರೇತಗಳು ಆತನ ಭಯದಿಂದ ಯಾತನೆಪಡುವವು.


ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ.


ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, ಅನುಕೂಲವಾದ ಯಾವ ಕತ್ತಲೂ, ಯಾವ ಗಾಢಾಂಧಕಾರವೂ ಇರುವುದಿಲ್ಲ.


ಸುನ್ನತಿಯಿಲ್ಲದವರಲ್ಲಿ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ, ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಎಲಬುಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು