Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಎಷ್ಟು ಅಗೆದರೂ ದೊರಕದು ಅಂಥವರಿಗೆ ನಿಧಿನಿಕ್ಷೇಪ ಅದಕ್ಕಿಂತ ಮಿಗಿಲಾಗಿ ಬಯಸಿದರೂ ಬಾರದು ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವನು ಸಾಯಲು ಬಯಸಿದರೂ ಸಾವು ಬರುವುದಿಲ್ಲ. ಹೂಳಿಟ್ಟಿರುವ ಭಂಡಾರವನ್ನು ಹುಡುಕುವುದಕ್ಕಿಂತಲೂ ಹೆಚ್ಚಾಗಿ ವ್ಯಥೆಯುಳ್ಳವನು ಸಾವನ್ನೇ ಹುಡುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ನಿಕ್ಷೇಪಕ್ಕಾಗಿ ಅಗಿಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:21
13 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.


ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು;


ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.


ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ವಿಜ್ಞಾಪಿಸಿಕೊಂಡನು.


ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.


ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.


ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.


ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.


ಅಯ್ಯೋ, ನನ್ನ ವಿಜ್ಞಾಪನೆಯು ನೆರವೇರುವುದಿಲ್ಲವೇ, ನಾನು ಬಯಸುವುದನ್ನು ದೇವರು ಕೊಡುವುದಿಲ್ಲವೇ?


ನಾನು ನಾಶವಾಗುವುದು ದೇವರಿಗೆ ಮೆಚ್ಚಿಕೆಯಾಗುವುದಾದರೆ, ತನ್ನ ಕೈ ಚಾಚಿ ನನ್ನನ್ನು ಸಂಹರಿಸಿದರೆ ಒಳ್ಳೆಯದು.


ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ.


ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”


ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು