Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಬಿತ್ತಿದ್ದನ್ನು ಮತ್ತೊಬ್ಬನು ಉಣ್ಣಲಿ, ನನ್ನ ಬೆಳೆಯು ನಿರ್ಮೂಲವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ಬಿತ್ತಿದ್ದನ್ನು ಮತ್ತೊಬ್ಬ ಉಣ್ಣಲಿ ನನ್ನ ಬೆಳೆಯು ಬುಡಮೇಲಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಬಿತ್ತಿದ್ದನ್ನು ಮತ್ತೊಬ್ಬನು ಉಣ್ಣಲಿ, ನನ್ನ ಬೆಳೆಯು ನಿರ್ಮೂಲವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಬಿತ್ತಿ ಬೆಳೆಸಿದ ಬೆಳೆಗಳನ್ನು ಬೇರೆಯವರು ತಿನ್ನಲಿ; ನಾನು ಬೆಳೆಸಿದ ಸಸಿಗಳು ಕೀಳಲ್ಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಬಿತ್ತುವುದನ್ನು ಬೇರೊಬ್ಬನು ಉಣ್ಣಲಿ; ನನ್ನ ಬೆಳೆಯು ಬುಡಮೇಲಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:8
15 ತಿಳಿವುಗಳ ಹೋಲಿಕೆ  

ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.


ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.


ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.


ತಮ್ಮ ಹೊಟ್ಟೆಗಾಗಿ ಬಯಲಿನಲ್ಲಿ ಸೊಪ್ಪನ್ನು ಕೊಯ್ದುಕೊಳ್ಳುವರು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುವರು.


ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವುದಿಲ್ಲ.


ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.


ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು.


ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.


ಅದು ನಾಶ ಲೋಕದವರೆಗೂ ನುಂಗುವ ಬೆಂಕಿಯಾಗಿದ್ದು, ನನ್ನ ಆದಾಯವನ್ನೆಲ್ಲಾ ನಿರ್ಮೂಲಮಾಡುತ್ತಿತ್ತು.


“ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು