Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾನಾರಿಗೂ ಮುಖದಾಕ್ಷಿಣ್ಯ ತೋರುವುದಿಲ್ಲ ಯಾವ ಮಾನವನಿಗೂ ಮುಖಸ್ತುತಿ ಸಲ್ಲಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ವಾದದಲ್ಲಿ ನಾನು ಮುಖದಾಕ್ಷಿಣ್ಯ ಮಾಡುವುದಿಲ್ಲ; ಯಾರ ಮುಖಸ್ತುತಿಯನ್ನೂ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು; ನಾನು ಯಾವ ಮನುಷ್ಯನನ್ನು ಹೊಗಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:21
18 ತಿಳಿವುಗಳ ಹೋಲಿಕೆ  

“‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಆತನಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? ದೇವರಿಗಾಗಿ ವಾದಿಸುವಿರಾ?


ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.


ನೀವು ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.


ಅಬ್ಷಾಲೋಮನು ನಡೆದಿರುವ ಘಟನೆಯಿಂದ ಅರಸನು ಕೋಪಗೊಳ್ಳದೆ ಇರುವಂತೆ ವಿಷಯವನ್ನು ಈ ರೀತಿ ಹೇಳುವಂತೆ ನಿನ್ನ ಸೇವಕನಾದ ಯೋವಾಬನೇ ಇದನ್ನು ಕಲಿಸಿದನು. ಆದರೆ ನನ್ನ ಒಡೆಯನು ದೇವದೂತನಂಥ ಜ್ಞಾನಿ. ಅವನು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವನು” ಎಂದು ಉತ್ತರಕೊಟ್ಟಳು.


ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.


ನನಗೆ ಉಪಶಮನವಾಗುವ ಹಾಗೆ ಮಾತನಾಡುವೆನು. ನನ್ನ ತುಟಿಗಳನ್ನು ತೆರೆದು ಉತ್ತರ ಹೇಳುವೆನು.


ಮುಖಸ್ತುತಿಯನ್ನು ಮಾಡುವುದಕ್ಕೆ ನನ್ನಿಂದಾಗುವುದಿಲ್ಲ; ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ನಿರ್ಮೂಲ ಮಾಡುವೆನು.


ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.


“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.


ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.


“ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು