Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರ ಕಿವಿಗಳನ್ನು ತೆರೆದು, ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆ ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೇವರು ಅವನ ಕಿವಿಗಳನ್ನು ತೆರೆಯುತ್ತಾನೆ ಉಪದೇಶಮಾಡಿ ಎಚ್ಚರಿಕೆ ನೀಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರ ಕಿವಿಗಳನ್ನು ತೆರೆದು ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆತನು ಅವರ ಕಿವಿಗಳಲ್ಲಿ ಮಾತಾಡಬಹುದು. ಆಗ ಅವರು ದೇವರ ಎಚ್ಚರಿಕೆಗಳಿಂದ ಬಹು ಭಯಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರು ಮನುಷ್ಯರ ಕಿವಿಗಳನ್ನು ತೆರೆದು, ಎಚ್ಚರಿಕೆಗಳಿಂದ ಮುದ್ರೆಹಾಕಿ ಮಾತಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:16
14 ತಿಳಿವುಗಳ ಹೋಲಿಕೆ  

ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಗಳನ್ನು ತೆರೆದು, ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು.


ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.


ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.


ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.


ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು.


ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.


ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.


ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು.


ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ನಿನ್ನ ಸೇವಕನಾದ ನನಗೆ ‘ನಾನು ನಿನಗೋಸ್ಕರ ಮನೆ ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.


ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.


ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, ಮಾನವನಿಗೆ ಗರ್ವವನ್ನು ಮರೆಮಾಡುವನು.


ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು