Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವನ ಆತ್ಮ ಅಧೋಲೋಕವನ್ನು ಸಮೀಪಿಸುವುದು ಅವನ ಪ್ರಾಣ ಮೃತ್ಯುದೂತರಿಗೆ ಹತ್ತಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವನಿಗೆ ಸಾವು ಸಮೀಪವಾಗಿದೆ; ಅವನ ಜೀವವು ಪಾತಾಳಕ್ಕೆ ಹತ್ತಿರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗೆ ಮನುಷ್ಯನ ಆತ್ಮವು ಸಮಾಧಿಗೆ ಸಮೀಪಿಸುವುದು. ಅವನ ಪ್ರಾಣವು ಸಾವಿನ ಸಂದೇಶವಾಹಕರ ಹತ್ತಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:22
17 ತಿಳಿವುಗಳ ಹೋಲಿಕೆ  

ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.


ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು.


ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ.


ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.


ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು.


“ನನ್ನ ಉಸಿರು ಕಟ್ಟುತ್ತಿದೆ, ನನ್ನ ಆಯಷ್ಕಾಲವು ಮುಗಿದಿವೆ, ಗೋರಿಯು ನನಗಾಗಿ ಕಾದಿದೆ.


ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.


ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ.


“ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.


ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.


ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು, ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದ ಹಾಗೆ ನಿಲ್ಲಿಸುವನು.


ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು