Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಮನುಷ್ಯರ ಮುಂದೆ ನಿಂತು - ನಾನು ಪಾಪಮಾಡಿ ನ್ಯಾಯವನ್ನು ಕೆಡಿಸಿದ್ದರೂ ಆತನು ಮುಯ್ಯಿ ತೀರಿಸದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು: ‘ನಾನು ಪಾಪಮಾಡಿದೆ, ನ್ಯಾಯವನ್ನು ಬಿಟ್ಟು ನಡೆದೆ. ಆದರೂ ದೇವರು ನನ್ನ ಪಾಪಕ್ಕೆ ತಕ್ಕಂತೆ ದಂಡಿಸಲಿಲ್ಲ. ದೇವರು ಮುಯ್ಯಿತೀರಿಸಲಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:27
30 ತಿಳಿವುಗಳ ಹೋಲಿಕೆ  

ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.


ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,


ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ.


ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?


ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು.


ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.


ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”


ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.


ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.


ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ. ಪೆ.


ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


‘ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ, ಅವನಿಗೆ ಯಾವ ಪ್ರಯೋಜನವೂ ಇಲ್ಲ’ ಎಂದು ಹೇಳಿದ್ದಾನಷ್ಟೆ.


ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.


ಆಗ ಆರೋನನು ಮೋಶೆಗೆ, “ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.


ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.


ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.


ನಾನು ಕಾಣದಿರುವುದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮೇಲೆ ಮಾಡುವುದಿಲ್ಲ’ ಎಂದು ಹೇಳುವುದಕ್ಕಾದೀತೇ?


ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.


ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು