Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ, ಜೀವಲೋಕದ ಬೆಳಕನ್ನು ಅನುಭವಿಸುವಂತೆ ಮಾಡುವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವನ ಆತ್ಮವನು ಅಧೋಲೋಕದಿಂದ ಹಿಂದಿರುಗಿಸುವನು ಜೀವಲೋಕದ ಬೆಳಕನು ಅನುಭವಿಸುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ದೇವರು ಎರಡು ಸಾರಿಯಲ್ಲದೆ ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ ಬಂದು, ಜೀವ ಬೆಳಕನ್ನು ಅನುಭವಿಸುವಂತೆಯೇ ದೇವರು ಹೀಗೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:30
15 ತಿಳಿವುಗಳ ಹೋಲಿಕೆ  

ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.


ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.


ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.


ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ,


ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು, ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದ ಹಾಗೆ ನಿಲ್ಲಿಸುವನು.


ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, ನಾನೇ ಮಾತನಾಡುವೆನು.


ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.


ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ.


ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.


ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು