Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ, ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕುಳಿತುಕೊಳ್ಳುವ, ಉನ್ನತಪದವಿಗೆ ಅವರನ್ನು ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತನ್ನ ಕಟಾಕ್ಷವನ್ನು ಸಜ್ಜನರ ಮೇಲೆ ಅಚಲವಾಗಿರಿಸುವನು ರಾಜರಂತೆ ಸಿಂಹಾಸನದ ಮೇಲೆ ಅವರನು ಕುಳ್ಳಿರಿಸುವನು ಅಮರವಾದ ಉನ್ನತ ಪದವಿಗೆ ಅವರನು ಏರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕೂತುಕೊಳ್ಳುವ ಉನ್ನತಪದವಿಗೆ ಅವರನ್ನು ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀತಿವಂತರನ್ನು ದೇವರು ಪರಿಪಾಲಿಸುವನು; ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; ಅವರಿಗೆ ಸದಾಕಾಲ ಗೌರವ ದೊರೆಯುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ನೀತಿವಂತರಿಂದ ತಮ್ಮ ಕಣ್ಣುಗಳನ್ನು ತೊಲಗಿಸುವುದಿಲ್ಲ; ದೇವರು ನೀತಿವಂತರನ್ನು ಅರಸುಗಳ ಸಂಗಡ ಸಿಂಹಾಸನದಲ್ಲಿ ಕುಳ್ಳಿರಿಸುವರು; ಹೌದು, ದೇವರು ಅವರನ್ನು ಎಂದೆಂದಿಗೂ ಉನ್ನತಕ್ಕೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:7
24 ತಿಳಿವುಗಳ ಹೋಲಿಕೆ  

ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.


ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.


ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.


ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.


ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.


ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”


ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.


ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.


“ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.


ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ? ಯಥಾರ್ಥರು ಅಳಿದು ಹೋದದ್ದೆಲ್ಲಿ?


ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ, ದುಃಖಿಸುವವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರುತ್ತಾನೆ.


ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.


ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದುಕೊಳ್ಳುತ್ತಿದ್ದೆನು.


ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.


ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ವಂಶದವರಿಗೆ ವೈಭವವುಳ್ಳ ಸಿಂಹಾಸನವಾಗಿರುವನು.


ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.


ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು