Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ನಂಬಿಕೆಗೆ ನಿನ್ನ ಭಯಭಕ್ತಿಯೂ, ನಿನ್ನ ನಿರೀಕ್ಷೆಗೆ ನಿನ್ನ ಸನ್ಮಾರ್ಗವೂ ಆಧಾರವಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ನಂಬಿಕೆಗೆ ಆಧಾರ ನಿನ್ನ ಭಯಭಕ್ತಿಯಲ್ಲವೆ? ನಿನ್ನ ನಿರೀಕ್ಷೆಗೆ ಅಸ್ತಿವಾರ ನಿನ್ನ ಆದರ್ಶವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ನಂಬಿಕೆಗೆ ನಿನ್ನ ಭಯಭಕ್ತಿಯೂ ನಿನ್ನ ನಿರೀಕ್ಷೆಗೆ ನಿನ್ನ ಸನ್ಮಾರ್ಗವೂ ಆಧಾರವಲ್ಲವೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀನು ದೇವರಲ್ಲಿ ಭಯಭಕ್ತಿಯಿಂದಿರುವುದರಿಂದ ಆತನಲ್ಲಿ ಭರವಸವಿಡು. ನೀನು ನೀತಿವಂತನಾಗಿರುವುದರಿಂದ ಅದೇ ನಿನ್ನ ನಿರೀಕ್ಷೆಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿನ್ನ ಭಯಭಕ್ತಿಯೇ ನಿನಗೆ ಭರವಸೆಯೂ ನಿನ್ನ ಸನ್ಮಾಮಾರ್ಗಗಳು ನಿನ್ನ ನಿರೀಕ್ಷೆಯೂ ಆಗಿರಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:6
17 ತಿಳಿವುಗಳ ಹೋಲಿಕೆ  

ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.


ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.


ನನ್ನ ನಿರೀಕ್ಷೆ ಎಂಥದು? ನನ್ನ ನಿರೀಕ್ಷೆಯನ್ನು ಯಾರು ನೋಡುವರು?


ಆದರೆ ನನ್ನ ಕೈ ಯಾವ ಬಲಾತ್ಕಾರವನ್ನೂ ಮಾಡಿಲ್ಲವಲ್ಲಾ, ನನ್ನ ವಿಜ್ಞಾಪನೆಯು ನಿರ್ಮಲವಾದದ್ದು.


ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು.


“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.


ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು