Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ; ಹೀಗಿರಲು ನನ್ನ ಮುಂದೆ ನಿಲ್ಲಬಲ್ಲವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದನು ಕೆಣಕಲು ಧೈರ್ಯಗೊಂಡಾಗ ಅದು ಉಗ್ರವಾಗುತ್ತದೆ ‘ನನ್ನ ಮುಂದೆ ನಿಲ್ಲಬಲ್ಲವರಾರು?’ ಎನ್ನುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆಯು ಯಾರಲ್ಲಿಯೂ ಇಲ್ಲ; ಹೀಗಿರಲು ನನ್ನ ಮುಂದೆ ನಿಲ್ಲಬಲ್ಲವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅದನ್ನು ಕೋಪಗೊಳಿಸುವಷ್ಟು ಧೈರ್ಯ ಯಾರಿಗೂ ಇಲ್ಲ. “ಹೀಗಿರುವಲ್ಲಿ ನನಗೆ ವಿರುದ್ಧವಾಗಿ ನಿಂತುಕೊಳ್ಳುವಷ್ಟು ಶಕ್ತಿ ಯಾರಿಗಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ; ಹೀಗಿರುವಾಗ, ನನಗೆ ಎದುರಾಗಿ ನಿಲ್ಲಲು ಶಕ್ತರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:10
13 ತಿಳಿವುಗಳ ಹೋಲಿಕೆ  

ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?


ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?


ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ, ದಿನಗಳನ್ನು ಶಪಿಸುವುದರಲ್ಲಿಯೂ ಜಾಣರಾದ (ಮಾಂತ್ರಿಕರು) ಅದಕ್ಕೆ ಶಾಪಕೊಡಲಿ.


ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.


ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು?


ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯಲು ಬಂದವನು ನೋಡಿದ ಮಾತ್ರಕ್ಕೆ ಬಿದ್ದು ಹೋಗುವನು.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?


ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ಮಿಣುಕದೆ ಹೋಗಲಿ. ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ. ಅರುಣೋದಯವೆಂಬ ರೆಪ್ಪೆ ತೆರೆಯುವುದನ್ನು ಅದು ಕಾಣದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು