Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಭಂಗಪಡಿಸುತ್ತಾನೆ ವಂಚಕರ ಉಪಾಯಗಳನು ಕೈಗೂಡಗೊಳಿಸನು ಅವರ ಪ್ರಯತ್ನಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯುಕ್ತಿವಂತರ ಕೈಯಿಂದ ಏನೂ ಆಗದಂತೆ ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರು ಯುಕ್ತಿವಂತರ ಕುತಂತ್ರಗಳನ್ನು ವಿಫಲಗೊಳಿಸಿ ಭಂಗಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ವಂಚಕರ ಯೋಜನೆಗಳನ್ನು ಭಂಗಪಡಿಸುತ್ತಾರೆ. ಕುಯುಕ್ತಿಯುಳ್ಳವರ ಕೈಗಳು ಯಾವುದೇ ಯಶಸ್ಸನ್ನು ಸಾಧಿಸದಂತೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:12
23 ತಿಳಿವುಗಳ ಹೋಲಿಕೆ  

ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.


ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.


ನಮ್ಮ ಶತ್ರುಗಳು ತಮ್ಮ ಉದ್ದೇಶ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದನೆಂದೂ ತಿಳಿದುಕೊಂಡಾಗ ಅವರು ನಮ್ಮನ್ನು ಬಿಟ್ಟು ಹೋದರು. ನಾವೆಲ್ಲರೂ ನಮ್ಮ ನಮ್ಮ ಪೌಳಿಗೋಡೆಯ ಕೆಲಸವನ್ನು ಪುನಃ ಪ್ರಾರಂಭಿಸಲು ತೊಡಗಿದೆವು.


ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.


ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.


ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ.


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.


ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.


ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ?


ಯಾಕೋಬನು ಹೊರಟುಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬಾನನಿಗೆ ತಿಳಿದುಬರಲು,


ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಮನಬಂದ ಕಡೆಗೆ ಅಲೆದಾಡಿದರು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವುದನ್ನು ನಿಲ್ಲಿಸಿಬಿಟ್ಟನು.


ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು.


ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.


ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ” ಎಂದು ತಿಳಿಸುತ್ತಿದ್ದನು.


ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲುಗಾರರನ್ನಿರಿಸಿದೆವು.


ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.


ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು