Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು, ಮಧ್ಯಾಹ್ನದಲ್ಲೇ ರಾತ್ರಿಯವರಂತೆ ತಡಕಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಹಗಲಿನಲ್ಲಿ ಕತ್ತಲೆಗೊಳಗಾಗಿ ಮಧ್ಯಾಹ್ನದಲ್ಲೂ ರಾತ್ರಿಯಲ್ಲಿರುವಂತೆ ತಡವಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯುಕ್ತಿವಂತರು ಹಗಲಿನಲ್ಲೂ ಕತ್ತಲೆಗೆ ಓಡಿಹೋಗುವರು; ನಡುಮಧ್ಯಾಹ್ನದಲ್ಲಿ ಕತ್ತಲೆಯಲ್ಲೋ ಎಂಬಂತೆ ಮುಗ್ಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕುತಂತ್ರರು ಹಗಲಿನಲ್ಲಿಯೇ ಕತ್ತಲೆಯನ್ನು ಸಂಧಿಸುತ್ತಾರೆ; ಮಧ್ಯಾಹ್ನದಲ್ಲಿ ರಾತ್ರಿಯಂತೆ ತಡಕಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:14
13 ತಿಳಿವುಗಳ ಹೋಲಿಕೆ  

ಅವರು ಬೆಳಕಿಲ್ಲದ ಕತ್ತಲಲ್ಲಿ ತಡಕಾಡುವರು; ಅವರನ್ನು ಅಮಲೇರಿದವರಂತೆ ಓಲಾಡಿಸಿ ತಡವರಿಸುವಂತೆ ಮಾಡುವನು.”


ಕುರುಡರಂತೆ ಗೋಡೆಯನ್ನು ತಡವರಿಸಿ ನಡೆಯುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡಕಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.


ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ.


ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.


ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.


ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವುದು, ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ, ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದು ಬಿಡುವುದು.


ಇದಲ್ಲದೆ ದಾರಿಕಾಣದಂತೆ ಕತ್ತಲೂ, ಮುಸುಕಿ ಜಲಪ್ರವಾಹವೂ ನಿನ್ನನ್ನು ಆವರಿಸುತ್ತವೆ.


ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, ಅದರ ಹಾದಿಗಳಲ್ಲಿ ಇರುವುದಿಲ್ಲ.


ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು, ಎತ್ತಿದ ಕೈ ಮುರಿಯುವುದು.


ತರುವಾಯ ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಯನ್ನು ಚಾಚು. ಆಗ ಐಗುಪ್ತ ದೇಶದಲ್ಲೆಲ್ಲಾ ಕತ್ತಲು ಉಂಟಾಗುವುದು. ಆ ಕತ್ತಲೆಯಿಂದಾಗಿ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.


ಮೋಶೆ ಆಕಾಶಕ್ಕೆ ಕೈಯನ್ನು ಚಾಚಿದಾಗ ಐಗುಪ್ತ ದೇಶದಲ್ಲೆಲ್ಲಾ ಮೂರು ದಿನ ಕಾರ್ಗತ್ತಲೆ ಮುಚ್ಚಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು