Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬದುಕು ನನಗೆ ಬೇಸರ; ನಿರಂತರ ಬಾಳು ನನಗೆ ಅನಿಷ್ಟ ನನ್ನ ದಿನಗಳು ನಿರರ್ಥಕ, ನನ್ನ ಗೊಡವೆ ನಿನಗೆ ಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಬೇಸರಗೊಂಡಿದ್ದೇನೆ, ನಿತ್ಯವಾಗಿ ಬದುಕುವದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಜೀವಿತವು ನನಗೆ ಅಸಹ್ಯವಾಗಿದೆ. ಶಾಶ್ವತವಾಗಿ ಬದುಕಲು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು! ನನ್ನ ಜೀವಿತಕ್ಕೆ ಅರ್ಥವೇ ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ನನ್ನ ಜೀವನವನ್ನು ದ್ವೇಷಿಸುತ್ತೇನೆ; ನಿರಂತರ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟುಬಿಡಿರಿ; ನನ್ನ ಬಾಳಿನ ದಿನಗಳಿಗೆ ಅರ್ಥವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:16
22 ತಿಳಿವುಗಳ ಹೋಲಿಕೆ  

ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.


ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.


ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.”


ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು, ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.


ನನ್ನ ದಿನಗಳು ಅಲ್ಪವಾಗಿರುತ್ತವಲ್ಲಾ? ಬಿಡು, ನಿನ್ನ ದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸು.


ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; ನನ್ನ ಪ್ರಾಣವನ್ನು ತಿರಸ್ಕರಿಸುತ್ತೇನೆ.


ನಾನು ನಾಶವಾಗುವುದು ದೇವರಿಗೆ ಮೆಚ್ಚಿಕೆಯಾಗುವುದಾದರೆ, ತನ್ನ ಕೈ ಚಾಚಿ ನನ್ನನ್ನು ಸಂಹರಿಸಿದರೆ ಒಳ್ಳೆಯದು.


ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ವಿಜ್ಞಾಪಿಸಿಕೊಂಡನು.


ಮನುಷ್ಯನು ಬರೀ ಉಸಿರೇ, ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.


ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.


ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು.


ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ.


ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ.


ಅವರು ಮಾಂಸಮಾತ್ರದವರೂ, ಶ್ವಾಸವನ್ನು ತಿರುಗಿ ಪಡೆಯದವರಾಗಿದ್ದಾರೆ ಎಂಬುದನ್ನು ನೆನಪುಮಾಡಿಕೊಳ್ಳುತ್ತಿದ್ದನು.


ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.


ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.


ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು