Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋಡ ಕರಗಿ ಮಾಯವಾಗುವಂತೆ ಪಾತಾಳಕ್ಕಿಳಿದವನು ಬಾರನು ಮತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಡ ಹರಿದು ಮಾಯವಾಗುವಂತೆ ಪಾತಾಳಕ್ಕೆ ಇಳಿದು ಹೋದವನು ತಿರಿಗಿ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೋಡವು ಕಣ್ಣಿಗೆ ಕಾಣದೆ ಇಲ್ಲವಾಗುವುದು. ಅದೇ ರೀತಿಯಲ್ಲಿ, ಸತ್ತು ಸಮಾಧಿಯಲ್ಲಿ ಹೂಳಲ್ಪಟ್ಟವನು ಹಿಂತಿರುಗಿ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮೋಡವು ಕರಗಿ ಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:9
14 ತಿಳಿವುಗಳ ಹೋಲಿಕೆ  

ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.


ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.”


ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು; ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು.


ನಾನು ಹಿಂದಿರುಗದ ದಾರಿಯನ್ನು, ಕೆಲವು ವರ್ಷಗಳೊಳಗೆ ಹಿಡಿಯುವೆನು.”


ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರೆನು.


ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು.


ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲಿ ಒಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನು.


ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ, ತನ್ನ ಮಿಂಚಿನ ಮೇಘಮಂಡಲವನ್ನು ಹರಡುವನು.


ಆಹಾ, (ಆತನ ಜ್ಞಾನವು) ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವುದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವುದೇನು?


ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು.


ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ, ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ.


ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ಧೂಳಿಗೆ ಸೇರಲು ಸಾಧ್ಯವೇ?”


ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು